ತುಮಕೂರು: ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಚಳವಳಿಯಲ್ಲಿ ದೇಶ ಒಂದಾಗಿ, ಜಾತಿ, ಧರ್ಮ ಮೀರಿ ಸಂಘಟಿತವಾಗಿ ಹೋರಾಡುತ್ತಿವೆ, ದೇಶಕ್ಕೆ ಅಪಾಯವಾಗಿರುವುದರ ವಿರುದ್ಧ ನಡೆಯುತ್ತಿರುವ ದೇಶ ಪ್ರೇಮಿ ಚಳವಳಿ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಭಿಪ್ರಾಯಪಟ್ಟರು.
ಬೆಂಗಳೂರು ವಿಭಾಗೀಯ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸಾರ್ವಭೌಮತೆಯನ್ನು ಧಿಕ್ಕಿರಿಸಿ ಮಸೂದೆ ರೂಪಿಸಿರುವ ಜನವಿರೋಧಿ, ಜೀವ ವಿರೋಧಿ ಕಾಯ್ದೆ ಇದಾಗಿವೆ, ರೈತರು ಮಾಡು ಇಲ್ಲವೇ ಮಡಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ ಎಂದರೆ.
ಈ ರೈತ ಚಳವಳಿ ಗೆದ್ದರೆ ದೇಶ ಗೆಲ್ಲಲ್ಲಿದೆ, ಕಾರ್ಮಿಕ, ದಲಿತ, ರೈತ ಸಂಯುಕ್ತ ಹೋರಾಟ ಸಮಿತಿ ಎತ್ತು, ಎಮ್ಮೆ, ಕೋಳಿ, ಎತ್ತಿನಗಾಡಿ, ಟ್ರ್ಯಾಕ್ಟರ್ ನೊಂದಿಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದೇವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನು ತಡೆಹಿಡಿದ್ದರೆ, ರಾಜ್ಯ ಸರ್ಕಾರ ಅದನ್ನು ಜಾರಿಗೆ ತಂದಿವೆ, ಎಪಿಎಂಸಿಗಳ ಬಳಿ ದುಡ್ಡಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ, ಶಿವಮೊಗ್ಗದಂತಹ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ವಹಿವಾಟು ಶೇ.18ಕ್ಕೆ ಇಳಿದಿದೆ, ಮುಂದಿನ ದಿನಗಳಲ್ಲಿ ಎಪಿಎಂಸಿಗಳು ಅದಾನಿ, ಅಂಬಾನಿಗಳ ಸಂತತಿ ಪಾಲಾಗಾಲಿದೆ ಎಂದು ಹೇಳಿದರು.
ಸರ್ಕಾರ ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ನೀಡಬೇಕು ಎಂದ ಅವರು 12ಜಿಲ್ಲೆಗಳಲ್ಲಿ ಬೆಳೆಯುವ ಮುಸುಕಿನಜೋಳವನ್ನು ಸರ್ಕಾರ ಖರೀದಿಸಿ ಪಶು ಆಹಾರವನ್ನಾಗಿ ಮಾರ್ಪಡಿಸಬೇಕು ಇದರಿಂದ ಉದ್ಯೋಗ ಹೆಚ್ಚಳವಾಗಲಿದೆ, ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳವಾಗಿದೆ, ಸರ್ಕಾರ ನೀಡುವ ಸಬ್ಸಿಡಿ ದೊರಕದಂತೆ ಆಗಿದೆ ಎಂದರು.
ಬರಪೀಡಿತ ಪ್ರದೇಶವಾದ ಚಿತ್ರದುರ್ಗದಲ್ಲಿ ಮಳೆಯಿಂದಾಗಿ ಈರುಳ್ಳಿ, ಶೇಂಗಾ ಬೆಳೆ ನಾಶವಾಗಿದೆ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು, ಪೂರ್ಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ ಅವರು, ಫಸಲ್ ಬೀಮಾ ಯೋಜನೆ ರೈತರ ಪರವಾಗಿಲ್ಲ ಅದು ವಿಮಾಸಂಸ್ಥೆಗಳ ಪರವಾಗಿದೆ ಎಂದು ದೂರಿದರು.
ನರೇಂದ್ರ ಮೋದಿ ಅವರ ಸ್ವಂತ ರಾಜ್ಯ ಗುಜರಾತ್ ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿಲ್ಲ, ಮೇಲ್ನೋಟಕ್ಕೆ ರೈತ ಪರವಾದ ಯೋಜನೆಗಳು ಕಾಪೆರ್Çೀರೇಟ್ ಸಂಸ್ಥೆಗಳ ಪರವಾಗಿದೆ, ಖಾಸಗಿ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರು ಮಾತನಾಡಿ ನ.26ರಂದು ಹೆದ್ದಾರಿ ಬಂದ್ ಮಾಡಲಿದ್ದೇವೆ, ಜಿಲ್ಲೆಯಲ್ಲಿ ಶೇಂಗಾ, ರಾಗಿ ನಾಶವಾಗಿವೆ, ಮಳೆಯಿಂದಾಗಿ ಬಾಳೆ ಬೆಲೆ ಕುಸಿದಿದೆ, ನೀರಾವರಿ ಯೋಜನೆ ಅನುμÁ್ಠನ ಮತ್ತು ರೈತರ ನಷ್ಟ ತುಂಬಿಕೊಡುವಂತೆ ಒತ್ತಾಯಿಸಿ, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ತಿಳಿಸಿದರು.
ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಡಿಸೆಂಬರ್ ನಲ್ಲಿ ಮಹಾ ಪಂಚಾಯತ್ ಹಮ್ಮಿಕೊಳ್ಳಲಾಗುವುದು ಎಂದ ಅವರು ಸಂಯುಕ್ತ ಹೋರಾಟ ಸಮಿತಿಯ ಮುಖಂಡರು, ಕಾರ್ಯಕರ್ತರು ಸೇರಿ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಒಳಗೊಂಡ ಮಹಾ ಪಂಚಾಯತಿ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತಸಂಘದ ರಾಜ್ಯ ಉಪಾಧ್ಯಕ್ಷ ಟಿ.ನುಲೇನೂರು ಶಂಕರಪ್ಪ, ವಿಭಾಗೀಯ ಕಾರ್ಯದರ್ಶಿ ಡಾ.ಚೌಕೀಮಠ್, ವಿಭಾಗೀಯ ಕಾರ್ಯದರ್ಶಿ ವಿ.ಗೋಪಾಲ್, ಸುರೇಶ್ ಬಾಬು, ಸಂಘಟನಾ ಕಾರ್ಯದರ್ಶಿ ರಾಜು, ಚಂದ್ರಶೇಖರ್, ಅನುಸೂಯಮ್ಮ ಜೆ.ಸಿ.ಶಂಕರಪ್ಪ, ಕೆ.ಮಲ್ಲಯ್ಯ ಸೇರಿದಂತೆ ಇತರರಿದ್ದರು.